ಯಡಿಯೂರಪ್ಪ ಮೊಮ್ಮಗಳ ಸಾವು: ಆತ್ಮಹತ್ಯೆ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಇಂದು ಬೆಳಗ್ಗೆ ಸುಮಾರು 10 ಗಂಟೆ ವೇಳೆಗೆ ಫ್ಯಾನ್‌ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಿ.ಎಸ್‌.ಯಡಿಯೂರಪ್ಪ ಅವರ ಎರಡನೇ ಪುತ್ರಿ ಪದ್ಮಾವತಿ ಅವರ ಪುತ್ರಿ ಸೌಂದರ್ಯ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ವಸಂತನಗರದ ಮೌಂಟ್‌ ಕಾರ್ಮಲ್‌ ಕಾಲೇಜು ಬಳಿ ಇರುವ ಫ್ಲ್ಯಾಟ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೌಂದರ್ಯ, ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು. 2018ರಲ್ಲಿ ವೈದ್ಯ ಡಾ. ನೀರಜ್‌ ಅವರನ್ನು ಸೌಂದರ್ಯ ಮದುಮೆಯಾದಿದ್ದರು. ಈಗ ಸೌಂದರ್ಯ ಅವರ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!