ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ನಡೆಯಲಿರುವ 78ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ ಪಶ್ಚಿಮ ಬಂಗಾಳದ ಕೃಷ್ಣನಗರದಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ‘ಹರ್ ಘರ್ ತಿರಂಗ’ ಬೈಕ್ ರ್ಯಾಲಿಯನ್ನು ಆಯೋಜಿಸಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಕೃಷ್ಣಾನಗರ, ಬಿಎಸ್ಎಫ್ ಡಿಐಜಿ ಸಂಜಯ್ ಕುಮಾರ್, “ದೇಶದ ಪ್ರತಿಯೊಬ್ಬ ನಾಗರಿಕರು ತಮ್ಮ ದೇಶದ ಬಗ್ಗೆ ಹೆಮ್ಮೆ ಪಡಬೇಕು ಮತ್ತು ಅವರ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಬೇಕೆಂದು ನಾವು ಬಯಸುತ್ತೇವೆ. ನಮ್ಮ ನೆರೆಯ ದೇಶಗಳಿಗೆ ವಿವಿಧತೆಯಲ್ಲಿ ಏಕತೆಯ ಸಂದೇಶ… ನಾವು ಆಗಸ್ಟ್ 15 ರಂದು ಹರ್ ಘರ್ ತಿರಂಗವನ್ನು ನೋಡಲು ಬಯಸುತ್ತೇವೆ” ಎಂದರು.
“ವಿವಿಧ ಜಾತಿಗಳಿಗೆ ಸೇರಿದ ಮತ್ತು ವಿವಿಧ ಧರ್ಮಗಳನ್ನು ಆಚರಿಸುವ ಜನರು ಇಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಸಹಬಾಳ್ವೆ ನಡೆಸಬಹುದು ಎಂಬುದನ್ನು ಅವರು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದರು.
ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಶ್ರೀನಗರದಲ್ಲಿ ‘ಹರ್ ಘರ್ ತಿರಂಗ’ ವಾಕಥಾನ್ ಅನ್ನು ಸಹ ಆಯೋಜಿಸಿದೆ.