ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಬಿಎಸ್ ಪಿ ಪಕ್ಷದ ಮುಖ್ಯಸ್ಥ ಕೆ ಆರ್ಮ್ ಸ್ಟ್ರಾಂಗ್ ಪ್ರಕರಣದ ಆರೋಪಿಯನ್ನು ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ.
ತಿರುವೆಂಗಡಂನಲ್ಲಿ ನಡೆದ ಎನ್ಕೌಂಟರ್ನಲ್ಲಿ ಶಂಕಿತನನ್ನು ಕೊಲ್ಲಲಾಯಿತು. ಚೆನ್ನೈನ ಮಾಧವರಂ ಬಳಿ ಎನ್ಕೌಂಟರ್ ಸಂಭವಿಸಿದೆ.
ಆರ್ಮ್ ಸ್ಟ್ರಾಂಗ್ ಅವರನ್ನು ಕೊಲ್ಲಲು ಬಳಸಿದ ಆಯುಧವನ್ನು ವಶಪಡಿಸಿಕೊಳ್ಳಲು ಪೊಲೀಸರು ತಿರುವೆಂಗಡಂನ ಮಾಧವರಂ ಬಳಿಯ ಸ್ಥಳಕ್ಕೆ ಹೋದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಹಂತದಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ.
ಜುಲೈ 5ರಂದು ಚೆನ್ನೈನ ಪೆರಂಬೂರ್ ಪ್ರದೇಶದಲ್ಲಿನ ನಿವಾಸದ ಬಳಿ ಆರು ಅಪರಿಚಿತರ ಗುಂಪು ಆರ್ಮ್ ಸ್ಟ್ರಾಂಗ್ ಅವರ ಮೇಲೆ ಮಾರಣಂತಿಕ ಹಲ್ಲೆ ನಡೆಸಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು.