ಹೊಸದಿಗಂತ ವರದಿ, ಬೀಳಗಿ :
ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿಸುವ ಜೊತೆಗೆ ವಿಕಸಿತ ಭಾರತಕ್ಕೆ ಶಕ್ತಿ ತುಂಬುವ ಬಜೆಟ್ ಇದಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ , ಮಾಜಿ ಸಚಿವ ಮುರುಗೇಶ ನಿರಾಣಿ ಅಭಿಪ್ರಾಯ ವ್ಯಕ್ತಪಡಿಸಿದರು.
ಭಾರತ ವಿಶ್ವದ ದೈತ್ಯ ಆರ್ಥಿಕ ಶಕ್ತಿಯಾಗಿ ಬೆಳೆಯಲು ಸಹಕಾರಿಯಾಗುವ ಈ ಬಜೆಟ್ ಶ್ರೀಸಾಮಾನ್ಯನ ಬದುಕಿಗೆ ಭದ್ರತೆ ತುಂಬುತ್ತದೆ. ಅನ್ನ, ನೀರು, ವಿದ್ಯುತ್, ಮೂಲಭೂತ ಸೌಕರ್ಯ, ನವೀಕರಿಸಬಹುದಾದ ಇಂಧನ, ಯುವಶಕ್ತಿಯ ಸಬಲೀಕರಣದ ಜೊತೆಗೆ ರೈತರಿಗೆ ಚೈತನ್ಯ ತುಂಬುವಲ್ಲಿ ಕೇಂದ್ರ ಸರ್ಕಾರದ ಈ ಬಾರಿಯ ಬಜೆಟ್ ಯಶಸ್ವಿಯಾಗಿದೆ ಎಂದಿದ್ದಾರೆ.