ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು, 8 ಕಾರ್ಮಿಕರು ಮೃತಪಟ್ಟಿದ್ದಾರೆ.ಈವರೆಗೆ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 13 ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಈ ನಡುವೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ಭ್ಉವನ್ ರೆಡ್ಡಿ ಹಾಗೂ ಗುತ್ತಿಗೆದಾರರ ಮುನಿಯಪ್ಪ ಎಂಬುವವರನ್ನು ಬಂಧಿಸಲಾಗಿದೆ.