ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, 12 ಮಂದಿ ರಕ್ಷಣೆ, ಓರ್ವ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂಬೈನ ಕುರ್ಲಾದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹನ್ನೆರಡು ಜನರನ್ನು ರಕ್ಷಣೆ ಮಾಡಲಾಗಿದೆ. ಅವಶೇಷಗಳಡಿ ಎಷ್ಟು ಮಂದಿ ಸಿಕ್ಕಿಬಿದ್ದಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟತೆಯಿಲ್ಲ, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಎನ್‌ಡಿಆರ್‌ಎಫ್ ಉಪ ಕಮಾಂಡೆಂಟ್ ಆಶಿಶ್ ಕುಮಾರ್ ತಿಳಿಸಿದ್ದಾರೆ.

ಘಟನೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಆದಿತ್ಯ ಠಾಕ್ರೆ ಪರಿಶೀಲನೆ ನಡೆಸಿದರು. ಬಿಎಂಸಿ ನಾಲ್ಕೂ ಕಟ್ಟಡಗಳಿಗೆ ಈಗಾಗಲೇ ನೋಟಿಸ್ ಜಾರಿ ಮಾಡಿತ್ತು. ಕಟ್ಟಡ ಶಿಥಿಲಗೊಂಡಿದ್ದರೂ ಸಹ ಇಲ್ಲಿ ಇನ್ನೂ ಕೆಲವು ಜನರು ವಾಸಿಸುತ್ತಿದ್ದರು. ಇದೀಗ ದುರಂತ ನಡೆದು ಹೋಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವ ಎಲ್ಲ ಜನರನ್ನು ರಕ್ಷಿಸುವುದು ಮೊದಲ ಆದ್ಯತೆಯಾಗಿದೆ. ಇಂತಹ ಘಟನೆಗಳು ನಡೆಯದಂತೆ ಬಿಎಂಸಿ ನೋಟಿಸ್ ನೀಡಿದ ಕೂಡಲೇ ಜಾಗ ಖಾಲಿ ಮಾಡುವಂತೆ ಜನತೆಗೆ ಸಚಿವ ಆದಿತ್ಯ ಠಾಕ್ರೆ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!