ಮಧ್ಯಪ್ರದೇಶದಲ್ಲಿ ಮನೆ ಮೇಲೆ ಬುಲ್ಡೋಜರ್: ಬಿಜೆಪಿ ಸರಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:‌
 
ಮಧ್ಯಪ್ರದೇಶದಲ್ಲಿ ದಲಿತರ ಮನೆ ಧ್ವಂಸ ಪ್ರಕರಣ ಸಂಬಂಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಆವಾಸ್ ಯೋಜನೆಯಡಿ ನಿರ್ಮಿಸಿದ್ದ ಮನೆಗಳನ್ನೂ ನೆಲಸಮಗೊಳಿಸಲಾಗಿದೆ.ಕೂಲಿ ಕೆಲಸಕ್ಕೆ ಹೋಗಿದ್ದ ಕುಟುಂಬಗಳಿಗೆ ಮಾಹಿತಿ ನೀಡದೆ ಮನೆ ಕೆಡವಲಾಗಿದೆ. ದಲಿತರು, ಆದಿವಾಸಿಗಳು ಮತ್ತು ಬಡವರ ಮೇಲೆ ದೌರ್ಜನ್ಯ ಎಸಗಿದ ಬಿಜೆಪಿ ಸರಕಾರಕ್ಕೆ ಮಧ್ಯಪ್ರದೇಶದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

ಗುರುವಾರ ಮಧ್ಯಪ್ರದೇಶದ ಆಡಳಿತವು ಸಾಗರ್ ಜಿಲ್ಲೆಯಲ್ಲಿ 10 ಮನೆಗಳನ್ನು ನೆಲಸಮಗೊಳಿಸಿದೆ. ಈ ಪೈಕಿ ಏಳು ಮನೆಗಳನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಯೋಜನೆಯಡಿ ನಿರ್ಮಿಸಲಾಗಿದೆ. ಅರಣ್ಯ ಭೂಮಿಯಲ್ಲಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ರಾಜ್ಯ ಆಡಳಿತ ಹೇಳಿಕೊಂಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!