ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಬೆಂಗಾವಲು ಪಡೆಯ 19 ವಾಹನಗಳಿಗೆ ಪೆಟ್ರೋಲ್ ಬಂಕ್ ಸಿಬ್ಬಂದಿ ನೀರು ಮಿಶ್ರಿತ ಡೀಸೆಲ್ ತುಂಬಿದ ಘಟನೆ ಇಂದೋರ್ನಲ್ಲಿ ನಡೆದಿದೆ.
ಇದರಿಂದಾಗಿ ಕೆಲ ಕಾರುಗಳು ಸ್ವಲ್ಪ ದೂರ ಚಲಿಸಿ ಹೆದ್ದಾರಿಯಲ್ಲೇ ನಿಂತಿವೆ. ಬಳಿಕ ಇಂಧನ ಪರಿಶೀಲನೆ ನಡೆಸಿದಾಗ ಡೀಸೆಲ್ಗೆ ನೀರು ಮಿಶ್ರಣವಾಗಿರುವುದು ಬೆಳಕಿಗೆ ಬಂದಿದೆ.
ಕೂಡಲೇ ಅಧಿಕಾರಿಗಳು ಪೆಟ್ರೋಲ್ ಬಂಕ್ನ್ನು ಸೀಜ್ ಮಾಡಿದ್ದಾರೆ. ಇನ್ನೂ ಕಲಬೆರಕೆ ಡೀಸೆಲ್ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.