ಹೊಸದಿಗಂತ ವರದಿ, ತುಮಕೂರು:
ಕೆ.ಎಸ್.ಆರ್. ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಾವಗಡ ಪೋಲಿಸ್ ಠಾಣೆ ವ್ಯಾಪ್ತಿಯ ತಿಮ್ಮಾಪುರ ಗೇಟ್ ಬಳಿ ಬುಧವಾರ ಸಂಜೆ ನಡೆದಿದೆ
ಪವನ್ ಕುಮಾರ್ (26)ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ, ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮಕ್ಕೆ ಸೇರಿದವನಾಗಿದ್ದಾನೆ.
KA 06, F1168 ಸಂಖ್ಯೆಯ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತುKA64 F3422 ಸಂಖ್ಯೆಯ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಪಾವಗಡ ಪೋಲಿಸ್ ಠಾಣೆ ಯಲ್ಲಿ ದೂರು ದಾಖಲಾಗಿದೆ