ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕಾನಂದ ನದಿಗೆ 18 ಪ್ರಯಾಣಿಕರಿದ್ದ ಬಸ್ ಬಿದ್ದು ಒಬ್ಬರು ಮೃತಪಟ್ಟಿದ್ದು, 10 ಮಂದಿ ನಾಪತ್ತೆಯಾಗಿದ್ದಾರೆ.
ಏಳು ಜನರನ್ನು ರಕ್ಷಿಸಲಾಗಿದ್ದು ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ನಾಪತ್ತೆಯಾದವರ ಪತ್ತೆ ಕಾರ್ಯ ನಡೆಸುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಸ್ ಬಿದ್ದಿದೆ. ಕೆಲವು ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರಿಂದ ಸಾವು ನೋವು ಕಡಿಮೆಯಾಗಿದೆ.
ಪೊಲೀಸ್, ಜಿಲ್ಲಾಡಳಿತ ಆಡಳಿತ ಮತ್ತು ವಿಪತ್ತು ನಿರ್ವಹಣಾ ವಿಭಾಗದ ಉನ್ನತ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ವದಂತಿಗಳನ್ನು ಹರಡದಂತೆ ಸರ್ಕಾರ ಜನರಲ್ಲಿ ಮನವಿ ಮಾಡಿದೆ.