ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು-ಅನಂತಪುರ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣ ಭಸ್ಮವಾಗಿದೆ.
ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಈ ಬಸ್ನ ಟೈರ್ ಬ್ಲಾಸ್ಟ್ ಆಗಿದೆ, ಈ ವೇಳೆ ಏಕಾಏಕಿ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ.
ಬಸ್ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಬಸ್ನಲ್ಲಿದ್ದ ಎಲ್ಲಾ ಪ್ರಯಾಣಿಕರು ಕೂಡಲೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಬಸ್ಸಿನಲ್ಲಿ ಹಬ್ಬಕ್ಕೆಂದು ಊರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಕೂಡ ಇದ್ದರು. ಇನ್ನು ಈ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಪ್ರಮಾಣಪತ್ರಗಳು ಮತ್ತು ದುಬಾರಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇನ್ನು ಈ ಘಟನೆಗೆ ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಬಸ್ಸಿನಲ್ಲಿ ಸುಟ್ಟ ವಾಸನೆ ಬರುತ್ತಿದೆ ಎಂದು ಹೇಳಿದ್ರು ಚಾಲಕ ಬಸ್ ನಿಲ್ಲಿಸಿಲ್ಲ ಎಂದು ಪ್ರಯಾಣಿಕರು ಹೇಳಿದ್ದಾರೆ.