ಹೊಸದಿಗಂತ ವರದಿ, ಮಂಡ್ಯ:
ಸಾರಿಗೆ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಗೋಪಾಲಪುರ ಗ್ರಾಮದ ಬಳಿ ಮಧ್ಯಾಹ್ನ ನಡೆದಿದೆ.
ಮೂಲತಃ ಮಲ್ಲಾಘಟ್ಟ ಗ್ರಾಮದ ಪ್ರದೀಪ (28) ಎಂಬಾತನೇ ಮೃತಪಟ್ಟವನಾಗಿದ್ದಾನೆ. ಈತ ಬೆಂಗಳೂರನಲ್ಲಿ ರಿಲಾಯನ್ಸ್ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಬೆಂಗಳೂರಿನಿಂದ ಬೈಕ್ನಲ್ಲಿ ಮಂಡ್ಯ ಮಾರ್ಗವಾಗಿ ತನ್ನ ಸಹೋದರಿ ಇರುವ ಗುಡಿಗೇನಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದ.
ಈ ವೇಳೆ ಮಂಡ್ಯದಿಂದ ನಾಗಮಂಗಲ ಕಡೆಗೆ ಹೋಗುತ್ತಿದ್ದ ಸಾರಿಗೆ ಬಸ್ಸು ಬೈಕ್ ತಾಗಿದ್ದುಘಿ, ಇದರಿಂದ ಆಯತಪ್ಪಿ ಕೆಳಗೆ ಬಿದ್ದ ಪ್ರದೀಪನ ತಲೆ ಮೇಲೆ ಎಡ ಭಾಗದ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬೆಂಗಳೂರಿನ ಹಂಪಿ ಬಡಾವಣೆ ನಿವಾಸಿಯಾಗಿರುವ ಪ್ರದೀಪ ಕಳೆದ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ. ಈತನ ತಾಯಿ ಕೆಲ ತಿಂಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರೆನ್ನಲಾಗಿದೆ.
ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಇನ್ಸ್ಪೆಕ್ಟರ್ ಸಂತೋಷ್, ಪಿಎಸ್ಐ ವೆಂಕಟೇಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ಮಿಮ್ಸ್ನ ಶವಾಗಾರಕ್ಕೆ ಸಾಗಿಸಿದರು.
ಈ ಸಂಬಂಧ ಸೆಂಟ್ರಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದುಘಿ, ಮುಂದಿನ ಕ್ರಮಕೈಗೊಂಡಿದ್ದಾರೆ.