ಬಸ್ ನಿಲ್ಲಿಸದ ಚಾಲಕರು: ವಿನೂತನ ರೀತಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಲೇಜು ತೆರೆಳಲು ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸುತ್ತಿಲ್ಲವೆಂದು ವಿದ್ಯಾರ್ಥಿನಿಯರು ವಿಭಿನ್ನವಾಗಿ ಪ್ರತಿಭಟಿಸಿದ ಸನ್ನಿವೇಶ ಕೇರಳದ ಕೋಝಿಕ್ಕೋಡ್‌ನಲ್ಲಿ ನಡೆದಿದೆ.

ಮಾವೂರ್‌ನಲ್ಲಿರುವ ಮಹ್ಲಾರ ಕಲಾ ಮತ್ತು ವಿಜ್ಞಾನ ಕಾಲೇಜಿನ ಮಹಿಳಾ ಕಾಲೇಜು ವಿದ್ಯಾರ್ಥಿಗಳು ತಮ್ಮ ನಿಗದಿತ ನಿಲ್ದಾಣದಲ್ಲಿ ಬಸ್ ಗಳನ್ನು ನಿಲ್ಲಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸ್ದದು, ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.


ಬಸ್‌ಗಳು ತಮ್ಮ ನಿಲ್ದಾಣಗಳಲ್ಲಿ ನಿಲ್ಲದ ಕಾರಣ ವಿದ್ಯಾರ್ಥಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಹೀಗಾಗಿ ಪ್ರಾಂಶುಪಾಲರ ಮೂಲಕ ವಿಷಯ ಪ್ರಸ್ತಾಪಿಸಿ ಮಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ನಂತರ ಬಸ್ ನಿಲ್ದಾಣದಲ್ಲಿ ಗೃಹ ರಕ್ಷಕರನ್ನೂ ನೇಮಿಸಲಾಗಿದ್ದು, ಚಾಲಕರು ನಿಲ್ದಾಣಗಳಲ್ಲಿ ಬಸ್ ನಿಲ್ಲಿಸಲು ಆರಂಭಿಸಿದರು. ಆದರೆ ಕೆಲವು ದಿನಗಳ ನಂತರ ಚಾಲಕರು ತಮ್ಮ ಹಳೆಯ ಅಭ್ಯಾಸವನ್ನು ಪುನರಾವರ್ತಿಸಿದರು. ಇದರಿಂದ ಚಿಂತೆಗೀಡಾದ ವಿದ್ಯಾರ್ಥಿಗಳು ಕಲ್ಲು ತೂರಾಟ, ಬಸ್‌ಗಳಿಗೆ ಅಡ್ಡಿಪಡಿಸದೆ , ಬಸ್ಸಿನ ಎಲ್ಲಾ ಸಿಬ್ಬಂದಿಗೆ ಸಿಹಿ ಹಂಚಿ ಚಪ್ಪಾಳೆ ತಟ್ಟಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!