ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು. ಪುರಿಯಿಂದ ಪಶ್ಚಿಮ ಬಂಗಾಳಕ್ಕೆ ತೆರಳುತ್ತಿದ್ದ ಬಸ್ನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಘಟನೆ ನಡೆದಿದೆ.
ಐವರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದೆ ಎಂದು ಎಸ್ಪಿ ವಿನೀತ್ ಅಗರ್ವಾಲ್ ಹೇಳಿದ್ದಾರೆ. ಬಸ್ಸಿನಲ್ಲಿ ಹೆಚ್ಚಿನ ಪ್ರಯಾಣಿಕರು ಪಶ್ಚಿಮ ಬಂಗಾಳದವರು ಎನ್ನಲಾಗಿದೆ.
ಪೊಲೀಸರ ಪ್ರಕಾರ, ರಾಷ್ಟ್ರೀಯ ಹೆದ್ದಾರಿ 16 ರ ಬಾರಾಬತಿ ಸೇತುವೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
38 ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಟಕ್ನ ಎಸ್ಸಿಬಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ. ಮೃತರ ಕುಟುಂಬಗಳಿಗೆ ಒಡಿಶಾ ಸರ್ಕಾರ 3 ಲಕ್ಷ ರೂಪಾಯಿ ಪರಿಹಾರ ನೀಡಲಿದೆ.