ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ 24 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ.
ಬಸ್ ಮೀರತ್ನಿಂದ ದೆಹಲಿಗೆ ತೆರಳುತ್ತಿದ್ದ ವೇಳೆ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇನಲ್ಲಿ ಗುರುವಾರ ಈ ದುರಂತ ಸಂಭವಿಸಿದೆ.
ಬಸ್ ಸ್ಟೇರಿಂಗ್ ಹೇಗೆ ನಿಯಂತ್ರಣ ತಪ್ಪಿತು ಎಂಬುದು ನನಗೆ ಗೊತ್ತಾಗಿಲ್ಲ ಎಂದು ಚಾಲಕ ಪ್ರದೀಪ್ ಅವರು ಪೊಲೀಸರಿಗೆ ತಿಳಿಸಿದ್ದು, ಚಾಲಕ ಮದ್ಯ ಸೇವನೆ ಮಾಡಿರಲಿಲ್ಲ ಎಂದು ಡಿಸಿಪಿ (ಗ್ರಾಮೀಣ) ವಿವೇಕ್ ಚಂದ್ ಯಾದವ್ ತಿಳಿಸಿದ್ದಾರೆ.
ಘಟನೆಯಲ್ಲಿ 24 ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸಂಜಯ್ ನಗರದ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡಿರುವ ಎಲ್ಲಾ ಪ್ರಯಾಣಿಕರು ಬಿಜ್ನೋರ್ ಜಿಲ್ಲೆಯವರಾಗಿದ್ದಾರೆ ಎಂದು ಡಿಸಿಪಿ ಹೇಳಿದ್ದಾರೆ.