ಹೊಸದಿಗಂತ ಡಿಜಿಟಲ್ ಡೆಸ್ಕ್
ಜಾರ್ಖಂಡ್ನ ಹಜಾರಿಬಾಗ್ನಲ್ಲಿ ನದಿಗೆ ಬಸ್ ಬಿದ್ದು ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಹಲವು ಮಂದಿ ವಾಹನದಲ್ಲಿ ಸಿಲುಕಿರುವ ಶಂಕೆಯಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ .
ಹಜಾರಿಬಾಗ್ ನ ತತಿಜಾರಿಯಾ ಪೊಲೀಸ್ ಠಾಣೆ ಪ್ರದೇಶದ ಸಿವಾನ್ ನದಿ ಸೇತುವೆಯ ಬಳಿ ಭೀಕರ ಬಸ್ ಅಪಘಾತ ಸಂಭವಿಸಿದೆ.ಬಸ್ಸಿನಲ್ಲಿ ಒಟ್ಟು 60 ಜನರಿದ್ದರು ಎಂದು ಹೇಳಲಾಗುತ್ತಿದೆ. ಬಸ್ ಗಿರಿದಿಹ್ ನಿಂದ ರಾಂಚಿಗೆ ಹೋಗುತ್ತಿತ್ತು.
ಗಿರಿದಿಹ್ನ ಸಿಖ್ ಸಮುದಾಯದ ಜನರು ರಾಂಚಿ ಗುರುದ್ವಾರದ ಅರ್ದಾಸ್ ಕೀರ್ತನ್ಗೆ ಸೇರಲು ಹೊರಟಿದ್ದರು ಎಂದು ಹೇಳಲಾಗುತ್ತಿದೆ. ಈ ಅಪಘಾತದಲ್ಲಿ, ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ, ಒಂದು ಡಜನ್ ಗಿಂತಲೂ ಹೆಚ್ಚು ಜನರು ತುಂಬಾ ಗಂಭೀರವಾಗಿ ಗಾಯಗೊಂಡಿದ್ದಾರೆ.