ಹೊಸದಿಗಂತ ಡಿಜಿಟಲ್ ಡೆಸ್ಕ್
ಶಿವಮೊಗ್ಗ ಜಿಲ್ಲೆ ಸಾಗರದಿಂದ ಶ್ರೀಕ್ಷೇತ್ರ ಸಿಗಂದೂರು ಮಾರ್ಗವಾಗಿ ಕಟ್ಟಿನಕಾರಿಗೆ ಹೊರಟಿದ್ದ ಖಾಸಗಿ ಬಸ್ವೊಂದು ನಿಯಂತ್ರಣ ತಪ್ಪಿ ಶರಾವತಿ ನದಿಗೆ ಬಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸಾಗರದಿಂದ ಕಟ್ಟಿನಕಾರಿಗೆ ಹೊರಟಿದ್ದ ಬಸ್ ಇಹೊಳೆಬಾಗಿಲಿನಲ್ಲಿ ಲಾಂಚ್ಗೆ ಹತ್ತಿಸಲು ರಿವರ್ಸ್ ತೆಗೆದುಕೊಂಡು ನಿಲ್ಲಿಸಲು ಮುಂದಾಗಿದ್ದಾಗ ಈ ಅವಘಡ ಸಂಭವಿಸಿದೆ.
ಬಸ್ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಈ ಅವಘಡದಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಸಾವು, ನೋವುಗಳು ಆಗಿಲ್ಲ.