Monday, October 2, 2023

Latest Posts

ಕಣಿವೆಗೆ ಉರುಳಿದ ಬಸ್:‌10 ಮಂದಿ ದಾರುಣ ಸಾವು, 20ಕ್ಕೂ ಹೆಚ್ಚು ಜನ ಆಸ್ಪತ್ರೆಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಜ್ಜರ್ ಕೋಟ್ಲಿ ಬಳಿ ಇಂದು ಬೆಳಗ್ಗೆ ಭಾರಿ ರಸ್ತೆ ಅಪಘಾತ ಸಂಭವಿಸಿದೆ. ಅಮೃತಸರದಿಂದ ಕತ್ರಾಕ್ಕೆ ಹೋಗುತ್ತಿದ್ದ ಬಸ್ ಆಕಸ್ಮಿಕವಾಗಿ ಕಣಿವೆಗೆ ಉರುಳಿದ್ದು, ಈ ಅವಘಡದಲ್ಲಿ 10 ಮಂದಿ ಸಾವನ್ನಪ್ಪಿದ್ದರೆ, 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಮ್ಮುವಿನ ಆಸ್ಪತ್ರೆಗೆ ರವಾನಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದೆಯಂತೆ. ಬಸ್ಸು ಅಮೃತಸರದಿಂದ ಕತ್ರಾಗೆ 75 ಪ್ರಯಾಣಿಕರೊಂದಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಸೋಮವಾರ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಟ್ರಾಕ್ಟರ್ ಟ್ರಾಲಿಯೊಂದು ಕಣಿವೆಗೆ ಬಿದ್ದ ನಂತರ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಆರು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿ 26 ಮಂದಿ ಗಾಯಗೊಂಡಿದ್ದರು. ಸಂತ್ರಸ್ತರು ಸಂಜೆ ಮಾನಸ ಮಾತಾ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಇದು ದೇವಸ್ಥಾನದಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ.

ಪೊಲೀಸರ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಟ್ರಾಲಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಕಣಿವೆಗೆ ಬಿದ್ದಿತು. ರಾಜ್ಯ ಸಚಿವ ರಾಜೇಂದ್ರ ಸಿಂಗ್ ಗುಡಾ ಅವರು ತಕ್ಷಣ ಉದಯಪುರವತಿಯಲ್ಲಿರುವ ಸಿಎಚ್‌ಸಿಗೆ ಬಂದು ಅಧಿಕಾರಿಗಳು ಮತ್ತು ಸ್ಥಳೀಯರಿಂದ ಘಟನೆಯ ಬಗ್ಗೆ ವಿಚಾರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!