ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾನುವಾರ ಮುಂಜಾನೆ ಉತ್ತರ ಪ್ರದೇಶದ ಇಟಾವಾ ಬಳಿಯ ಆಗ್ರಾ-ಲಖನೌ ಎಕ್ಸ್ಪ್ರೆಸ್ವೇಯಲ್ಲಿ ಪ್ರಯಾಣಿಕರ ಬಸ್ ಡಂಪರ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 45 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
ಬಸ್ ಯುಪಿಯ ಗೋರಖ್ಪುರದಿಂದ ರಾಜಸ್ಥಾನದ ಅಜ್ಮೀರ್ಗೆ ಹೋಗುತ್ತಿತ್ತು ಎನ್ನಲಾಗಿದೆ.
ಮುಂಜಾನೆ 2.30ರ ಸುಮಾರಿಗೆ ಡಂಪರ್ನ ಟೈರ್ ಒಡೆದು ವೇಗವಾಗಿ ಬಂದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಗಾಯಾಳುಗಳನ್ನು ತಕ್ಷಣವೇ ಸೈಫೈನಲ್ಲಿರುವ ಪಿಜಿಐ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮೂಲಗಳ ವರದಿ ತಿಳಿಸಿದೆ.