ನಾಲ್ಕು ವರ್ಷದ ಬಾಲಕನ ಮೇಲೆ ಹರಿದ ಬಸ್: ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಲ್ಕು ವರ್ಷದ ಬಾಲಕನ ಮೇಲೆ ಖಾಸಗಿ ಶಾಲೆಯ ಬಸ್ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಕ್ರಾಸ್ ಬಳಿ ನಡೆದಿದೆ.

ಸಂಗಣ್ಣ ಹೊಸೂರು ಎಂಬುವವರ ಪುತ್ರ ನಾಲ್ಕು ವರ್ಷದ ಅಭಿನಂದನ್ ಮೃತ ಬಾಲಕ. ವೇಗವಾಗಿ ಬಂದ ಶಾಲಾ ಬಸ್ ಬಾಲಕನ ಮೇಲೆಯೇ ಹರಿದು ಹೋಗಿದೆ.

ಬಾಲಕನ ಕೈ ತುಂಡಾಗಿದ್ದು, ದೇಹ ಛಿದ್ರ ಛಿದ್ರಗೊಂಡಿದೆ.ಅಪಘಾತದ ಭೀಕರತೆಗೆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!