ಬಸ್-ಟಿಪ್ಪರ್ ನಡುವೆ ಡಿಕ್ಕಿ: 12 ಮಂದಿ ಸಜೀವ ದಹನ, ಸುಟ್ಟು ಬೂದಿಯಾದ ಖಾಸಗಿ ಬಸ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಖಾಸಗಿ ಬಸ್ ಒಂದು ಟಿಪ್ಪರ್ಗೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದು ಹಲವು ಮಂದಿ ಗಾಯಗೊಂಡ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಮಾರ್ಕಪುರಂ ಜಿಲ್ಲೆಯ ರಾಯವರಂ ಸಮೀಪ ಈ ದುರ್ಘಟನೆ ನಡೆದಿದೆ. ಹರಿಕೃಷ್ಣ ಟ್ರಾವೆಲ್ಸ್ಗೆ ಸೇರಿದ ಬಸ್ ಜಲ್ಲಿ ತುಂಬಿದ್ದ ಟಿಪ್ಪರ್ಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಬಸ್ ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಬೆಂಕಿಯ ತೀವ್ರತೆಯಿಂದ ಪ್ರಯಾಣಿಕರಿಗೆ ತಪ್ಪಿಸಿಕೊಳ್ಳಲು ಅವಕಾಶ ಸಿಗದೆ 12 ಮಂದಿ ಸಜೀವ ದಹನವಾಗಿದ್ದಾರೆ. … Continue reading ಬಸ್-ಟಿಪ್ಪರ್ ನಡುವೆ ಡಿಕ್ಕಿ: 12 ಮಂದಿ ಸಜೀವ ದಹನ, ಸುಟ್ಟು ಬೂದಿಯಾದ ಖಾಸಗಿ ಬಸ್
Copy and paste this URL into your WordPress site to embed
Copy and paste this code into your site to embed