ಹೊಸ ದಿಗಂತ ವರದಿ , ಅಂಕೋಲಾ:
ಮನೆ ಗೋಡೆ ಕುಸಿದು ಇಬ್ಬರು ಮೃತ ಪಟ್ಟ ಘಟನೆ ತಾಲೂಕಿನ ಭಾವಿಕೇರಿಯಲ್ಲಿ ಸಂಭವಿಸಿದೆ.
ಭಾವಿಕೇರಿ ನಿವಾಸಿ ಮಧುಕರ ಸುಬ್ರಾಯ ನಾಯಕ(58) ಮತ್ತು ಶಾಂತಾರಾಮ ನಾರಾಯಣ ನಾಯಕ (58) ಎನ್ನುವವರು ಮೃತ ದುರ್ದೈವಿಗಳಾಗಿದ್ದು, ಮಧುಕರ ನಾಯಕ ಅವರ ಹಳೆಯ ಮನೆಯ ಗೋಡೆ ತೆರುವುಗೊಳಿಸಿಲು ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಗೋಡೆ ಕುಸಿದು ಬಿದ್ದ ಪರಿಣಾಮವಾಗಿ ಮಣ್ಣಿನ ಅಡಿಯಲ್ಲಿ ಸಿಲುಕಿ ಗಂಭೀರ ಸ್ಥಿತಿಯಲ್ಲಿ ಇದ್ದವರನ್ನು ಪ್ರತ್ಯೇಕವಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಓರ್ವರು ಕುಮಟಾ ಮಿರ್ಜಾನ ಬಳಿ ಇನ್ನೋರ್ವರು ಕುಂದಾಪುರ ಬೈಂದೂರು ಬಳಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.
ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು , ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.