ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7ರಂದು ಉಪ ಚುನಾವಣೆ ಘೋಷಣೆ

ಹೊಸದಿಗಂತ ,ಯಾದಗಿರಿ:

ಲೋಕಸಭಾ ಚುನಾವಣೆಯ ವೇಳೆಯೇ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7ರಂದು ಉಪ ಚುನಾವಣೆ ಘೋಷಣೆ.

ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತ ಫೆ.25ರಂದು ಸಾವನ್ನಪ್ಪಿದ್ದರು. ಕಾಂಗ್ರೆಸ್ ಶಾಸಕರಾಗಿದ್ದ ಇವರು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಸಿದ್ದರು.

ಇದರ ಬೆನ್ನಲ್ಲಿಯೇ ಶಾಸಕರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ತೆರವಾದ ಶಾಸಕ ಸ್ಥಾನಕ್ಕೆ ಈಗ ಉಪಚುನಾವಣೆಯನ್ನು ಕೈಗೊಳ್ಳಲಾಗುತ್ತಿದೆ. ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ಕೂಡ ಮಾಡಲಾಗಿತ್ತು.

ಇದರ ಜೊತೆಗೆ, ಬಹು ಅಂಗಾಂಗ ವೈಫಲ್ಯವೂ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.. ಆದರೆ ದಿಢೀರನೆ ಹೃದಯಾಘಾತ ಸಂಭವಿಸಿ ಚಿಕಿತ್ಸೆ ಪಲಕಾರಿಯಾಗದೆ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!