ಹೊಸದಿಗಂತ ಡಿಜಿಟಲ್ ಡೆಸ್ಕ್
ಪ್ರಮೋದ್ ಮಧ್ವರಾಜ್ ಅವರು ಬಿಜೆಪಿಗೆ ಶನಿವಾರ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿಯ ಧ್ವಜ ಪಡೆದು ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಒಂದು ಗಂಟೆಯೊಳಗೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಶುಕ್ರವಾರ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಬಿಜೆಪಿ ಸೇರ್ಪಡೆಗೊಳ್ಳಲು ಪ್ರಮೋದ್ ಮಧ್ವರಾಜ್ ಅವರ ಬಗ್ಗೆ ವರದಿಯನ್ನು ರಾಜ್ಯ ನಾಯಕರಿಗೆ ವರದಿ ಸಲ್ಲಿಸಿದ್ದೇವೆ ಎಂದು ಹೇಳಿದ್ದರು.
ಇದರ ಬೆನ್ನಲ್ಲೇ ಪ್ರಮೋದ್ ಮಧ್ವರಾಜ್ ಇಂದು ನನ್ನ ಬಳಿ ಯಾವುದೇ ಮಾಹಿತಿ ಇಲ್ಲ, ನನಗೆ ಮಾಹಿತಿ ಬಂದ ನಂತರ ನಿಮಗೆಲ್ಲಾ ಮಾಹಿತಿ ನೀಡುವೆ ಎಂದು ಪತ್ರಕರ್ತರಿಗೆ ಶುಕ್ರವಾರ ಸಂಜೆ ಮಲ್ಪೆಯಲ್ಲಿ ಉತ್ತರಿಸಿದ್ದರು.