ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ಲೀನ್ ಚಿಟ್ ಸಿಕ್ಕಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನನ್ನನ್ನು ವಾಪಾಸ್ ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ಪಟ್ಟು ಹಿಡಿದಿದ್ದರು. ಈ ಬಗ್ಗೆ ಮಾತನಾಡಿ, ನನಗೆ ಇನ್ನೂ ಯಾಕೆ ಸ್ಥಾನ ಕೊಟ್ಟಿಲ್ಲ ತಿಳಿದಿಲ್ಲ, ಸಿಎಂ ಬೊಮ್ಮಾಯಿ ಅವರೇ ಇದಕ್ಕೆ ಉತ್ತರ ನೀಡಬೇಕು ಎಂದು ಬಹಿರಂಗವಾಗಿ ಹೇಳಿದ್ದರು.
ಇದೀಗ ಮತ್ತೆ ಸಚಿವ ಸ್ಥಾನ ಸಿಗುವ ಭರವಸೆ ಸಿಕ್ಕಿದ್ದು, ಇನ್ನು ಯಾವುದೇ ಕಠಿಣ ತೀರ್ಮಾನ ಮಾಡೋದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಅವರಿಂದ ಸಂಪುಟಕ್ಕೆ ವಾಪಾಸಾಗುವ ಭರವಸೆ ಸಿಕ್ಕಿದೆ ಹಾಗಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳೋದಿಲ್ಲ ಎಂದು ಹೇಳಿದ್ದಾರೆ.
ಮತ್ತೆ ಈಶ್ವರಪ್ಪ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಹೈಕಮಾಂಡ್ ಜತೆ ಮಾತನಾಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.