ಕೆಲವೇ ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ: ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನ ಮಂಡಲ ಅಧಿವೇಶನ ಮುಗಿದಿದ್ದು, ವರಿಷ್ಠರ ಜತೆಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಿಸುವ ಮೂಲಕ ಖಾಲಿಯಿರುವ ಆರು ಸ್ಥಾನಗಳನ್ನು ತುಂಬಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅಧಿವೇಶನ ಮುಗಿಯಲೆಂದು ಕಾಯುತ್ತಿದ್ದೆ.ವರಿಷ್ಠರ ಸೂಚನೆಯಂತೆ ಸಂಪುಟಕ್ಕೆ ಸೇರಿಸಿಕೊಳ್ಳುವವರ ಪಟ್ಟಿ ಕಳುಹಿಸುವೆ ಅಥವಾ ದೆಹಲಿಗೆ ತೆರಳಿ ಖುದ್ದು ಮಾತುಕತೆ ನಡೆಸಿ ಒಪ್ಪಿಗೆ ಪಡೆಯುವೆ ಎಂದರು.

ಇನ್ನು ಗುತ್ತಿಗೆದಾರರ ಸಂಘದವರಿಗೆ ಈಗಲೂ ಹೇಳುವೆ. 40 ಪರ್ಸೆಂಟ್ ಕಮಿಷನ್ ಆರೋಪದ ಬಗ್ಗೆ ದೂರು ಅಥವಾ ಸಣ್ಣ ಪುರಾವೆ ಕೊಡಿ, ತಕ್ಷಣ ಲೋಕಾಯುಕ್ತ ತನಿಖೆಗೆ ಒಪ್ಪಿಸುವೆ ಎಂದು ಸಿಎಂ ಬೊಮ್ಮಾಯಿ ಪುನರುಚ್ಚರಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!