ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಸಿತು. ಈ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ.
ಜಾತಿ ಗಣತಿಯ ಮೂಲ ಜನಗಣತಿಯಲ್ಲೇ ಸೇರಿಸುವ ನಿರ್ಧಾರ
ಕಬ್ಬು ಬೆಳೆಗಾರರಿಗೆ ಗುಡ್ನ್ಯೂಸ್, ಎಫ್ಆರ್ಪಿ (Fair and Remunerative Price) ಹೆಚ್ಚಳ( ಕ್ವಿಂಟಾಲ್ಗೆ 355 ರೂ ನಿಗಧಿ, ಅದಕ್ಕಿಂತ ಕಡಿಮೆ ಬೆಲೆಗೆ ಖರೀದಿಸಲು ಸಾಧ್ಯವಿಲ್ಲ)
ಶಿಲ್ಲಾಂಗ್ನಿಂದ ಸಿಲ್ವರ್ ಕಾರಿಡಾರ್ ಯೋಜನೆಗೆ ಅನುಮೋದನೆ (ಮೇಘಾಲಯದಿಂದ ಅಸ್ಸಾಂಗೆ ಸಂಪರ್ಕಿಸುವ ಹೊಸ ಹೆದ್ದಾರಿ)
166.8 ಕಿಲೋ ಮೀಟರ್ ಉದ್ದದ ಚತುಷ್ಪಥ ರಸ್ತೆಗೆ ಕೇಂದ್ರ ಸರ್ಕಾರ ಅನುಮತಿ
ಇನ್ನು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಬಳಿಕ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಂದು 4 ಉನ್ನತ ಮಟ್ಟದ ಸಭೆ ನಡೆಸಿದರು. ಅದರಲ್ಲಿ ರಾಜಕೀಯ ವ್ಯವಹಾರಗಳ ಸಚಿವ ಸಂಪುಟ ಸಭೆಯು ತುಂಬಾನೇ ಮಹತ್ವ ಪಡೆದುಕೊಂಡಿತ್ತು. ಪಹಲ್ಗಾಮ್ ದಾಳಿ ವಿಚಾರವಾಗಿ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ. ಸದ್ಯದ ಪರಿಸ್ಥಿತಿಯಲ್ಲಿ ಅದನ್ನು ಮೋದಿ ಸರ್ಕಾರ ರಿವೀಲ್ ಮಾಡಿಲ್ಲ.