ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಿಎಎ ಜಾರಿ ಕುರಿತು ಇಂದು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದ್ದು. ಈ ಕಾನೂನಿನ ನಿಯಮಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಬಿಜೆಪಿ ಸಿಎಎ ಜಾರಿಗೆ ತಂದಿದೆ. ಇದನ್ನು ಮೊದಲೇ ಏಕೆ ಜಾರಿಗೆ ತರಲಿಲ್ಲ? ಇಷ್ಟು ವರ್ಷಗಳ ಕಾಲ ಸುಮ್ಮನಿದ್ದದ್ದು ಏಕೆ? ಸೋಲಿನ ಭಯದಿಂದ ಸಿಎಎ ತರಲಾಗಿದೆ ಎಂದು ಆರೋಪಿಸಿದ್ದಾರೆ.