ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ನೀಡಿದ್ದ ಸಂಪುಟ ದರ್ಜೆಯ ಸ್ಥಾನಮಾನ ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನಾಡೋಜ ಡಾ: ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ತಿಳಿಸಿದೆ.