ಖಾಸಗಿ ಮಾರುಕಟ್ಟೆ ನಿರ್ಮಾಣಕ್ಕೆ ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಹೊಸದಿಗಂತ ವರದಿ, ಬೆಳಗಾವಿ
ನಗರದಲ್ಲಿ ಖಾಸಗಿ ಮಾರುಕಟ್ಟೆ ನಿರ್ಮಾಣ‌‌ಕ್ಕೆ ಸಹಕಾರ ನೀಡಿದ ಆರೋಪ ಹೊತ್ತಿರುವ ಅಧಿಕಾರಿಗಳ ಮೇಲೆ ನ್ಯಾಯಾಲಯದ ನಿರ್ದೇಶನದಂತೆ ಪ್ರಕರಣ ದಾಖಲಾಗಿರುವುದು ಸ್ವಾಗತಾರ್ಹ. ಅದೇರೀತಿಯಲ್ಲಿ ಪೊಲೀಸರು ತ್ವರಿತಗತಿಯಲ್ಲಿ ತ‌ನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಒತ್ತಾಯಿಸಿದರು.
ಶನಿವಾರ ನಗರದದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಖಾಸಗಿ ಮಾರುಕಟ್ಟೆ ನಿರ್ಮಾಣ‌‌ ಮಾಡಲು ಸಹಕಾರ ನೀಡಿದ ಅಂದಿನ ಜಿಲ್ಲಾಧಿಕಾರಿ ಎನ್.‌ಜಯರಾಮ್, ಬುಡಾ ಆಯುಕ್ತ, ತಹಸೀಲ್ದಾರ ಪ್ರೀತಂ ನಸಲಾಪುರೆ ಅವರ ಮೇಲೆ ಏ.26 ರಂದು ಮಾಳಮಾರುತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ತ್ವರಿತಗತಿಯಲ್ಲಿ ಕ್ರಮವಹಿಸಲಿ ಎಂದು ಹೇಳಿದರು.
ಆಮ್ ಆದ್ಮಿ ಪಾರ್ಟಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ‌ಟೋಪಣ್ಣವರ, ಶಂಕರ ಹೆಗಡೆ, ಶಿವಲೀಲಾ‌ ಮಿಸಾಳೆ, ಸತೀಶ ಪಾಟೀಲ ಉಪಸ್ಥಿತರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!