ಹೊಸದಿಗಂತ ಆನ್ಲೈನ್ ಡೆಸ್ಕ್
ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹರ್ಷ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಫೆಬ್ರವರಿ 23 ರಂದು ಪ್ರತಿಭಟನೆಗೆ ಕರೆ ನೀಡಲಾಗಿದೆ.
ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ.
ನಿನ್ನೆ ಭಜರಂಗದಳದ ಕಾರ್ಯಕರ್ತ ಹರ್ಷ ಎಂಬುವರನ್ನು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಕಲ್ಲು ತೂರಾಟ ನಡೆಸಲಾಗಿದ್ದು, ಅಂಗಡಿ ಮುಂಗಟ್ಟುಗಳು, ಮನೆ, ವಾಹನಗಳಿಗೆ ಹಾನಿ ಮಾಡಲಾಗಿದೆ.