ಗಡಿಪಾರು ಎದುರಿಸುತ್ತಿರುವ ಭಾರತೀಯ ವಿದ್ಯಾರ್ಥಿಗಳ ಪರ ನಿಂತ ಕೆನಡಾ ವಿರೋಧ ಪಕ್ಷದ ನಾಯಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೆನಡಾದ ವಿರೋಧ ಪಕ್ಷದ ನಾಯಕ ಪಿಯರೆ ಪೊಯ್ಲಿವ್ರೆ ಗಡಿಪಾರು ಎದುರಿಸುತ್ತಿರುವ ಭಾರತೀಯ ವಿದ್ಯಾರ್ಥಿಗಳ ಬೆಂಬಲಕ್ಕೆ ಬಂದಿದ್ದಾರೆ.
ಗಡಿಪಾರು ಮಾಡುವುದನ್ನು ನಿಲ್ಲಿಸಲು ಸರ್ಕಾರವನ್ನು ಒತ್ತಾಯಿಸಿದ ಅವರು “ವಂಚಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಮತ್ತು “ಪ್ರಾಮಾಣಿಕ ವಿದ್ಯಾರ್ಥಿಗಳು ಉಳಿಯಲು ಮತ್ತು ಕೆಲಸ ಮಾಡಲು ಹಾಗೆಯೇ ಕೆನಡಾಕ್ಕೆ ಕೊಡುಗೆ ನೀಡಲು ಅವಕಾಶ ಮಾಡಿಕೊಡಿ” ಎಂದು ಸರ್ಕಾರವನ್ನು ಒತ್ತಾಯಿಸಿದರು.

ವಂಚಕ ಹಗರಣ ಕಲಾವಿದರಿಂದ ಅಂತರರಾಷ್ಟ್ರೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಟ್ರುಡೊ ಸರ್ಕಾರ ವಿಫಲವಾಗಿದೆ. ಈಗ, ಟ್ರೂಡೊ ವಿದ್ಯಾರ್ಥಿಗಳನ್ನು ಗಡಿಪಾರು ಮಾಡುವ ಮೂಲಕ ಸಂತ್ರಸ್ತರನ್ನು ಶಿಕ್ಷಿಸುತ್ತಿದ್ದಾರೆ. ಸದುದ್ದೇಶದಿಂದ ಕಾರ್ಯನಿರ್ವಹಿಸಿದವರು ಮತ್ತು ಕೆಲ ವರ್ಷಗಳಿಂದ ಇಲ್ಲಿ ಕೆಲಸ ಮಾಡುತ್ತಾ ತೆರಿಗೆ ಪಾವತಿಸುತ್ತಿದ್ದಾರೆ. ವಂಚಕರ ವಿರುದ್ಧ ಕಾನೂನು ಕ್ರಮ ಜರುಗಿಸಿ. ಗಡೀಪಾರು ಮಾಡುವುದನ್ನು ನಿಲ್ಲಿಸಿ. ಪ್ರಾಮಾಣಿಕ ವಿದ್ಯಾರ್ಥಿಗಳು ಕೆನಡಾದಲ್ಲಿ ಉಳಿಯಲು, ಕೆಲಸ ಮಾಡಲು ಮತ್ತು ಕೊಡುಗೆ ನೀಡಲು ಅವಕಾಶ ಮಾಡಿಕೊಡಿ ಎಂದು ಕೆನಡಾದ ವಿರೋಧ ಪಕ್ಷದ ನಾಯಕ ಪೊಯಿಲಿವ್ರೆ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಕೆನಡಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಒಂದು ವಿಭಾಗವನ್ನು ಗಡೀಪಾರು ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಮೋಸದ ಪ್ರವೇಶ ಪತ್ರಗಳನ್ನು ಸಲ್ಲಿಸಿದ ಆರೋಪದ ಮೇಲೆ ಗಡೀಪಾರು ಮಾಡಲಾಗುವುದು ಎಂದು ತಿಳಿಸಿದೆ. ಈ ವಿಚಾರವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ತಮ್ಮ ಕೆನಡಾದ ರಾಯಭಾರಿಗಳೊಂದಿಗೆ ಚರ್ಚಿಸುತ್ತಿದ್ದಾರೆ ಎಂದು ಎಂದು ಮೂಲಗಳು ತಿಳಿಸಿವೆ.

ಜೈಶಂಕರ್ ಅವರು ಜೂನ್ 8 ರಂದು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ತಮ್ಮ ಶಿಕ್ಷಣವನ್ನು ಪ್ರಾಮಾಣಿಕವಾಗಿ ಕೈಗೊಂಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಹೇಳುತ್ತಾ ಭಾರತೀಯ ವಿದ್ಯಾರ್ಥಿಗಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು.

ಮಾಧ್ಯಮ ವರದಿಗಳ ಪ್ರಕಾರ ಸುಮಾರು 700 ವಿದ್ಯಾರ್ಥಿಗಳು ಗಡಿಪಾರು ಮಾಡುವುದನ್ನು ಪ್ರತಿಭಟಿಸುತ್ತಿದ್ದಾರೆ. ಈ ವಿದ್ಯಾರ್ಥಿಗಳಲ್ಲಿ ಹೆಚ್ಚಿನವರು 2017-2019ರ ಅವಧಿಯಲ್ಲಿ ಕೆನಡಾಕ್ಕೆ ಹೋಗಿದ್ದರು. ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ, ಅವರಲ್ಲಿ ಕೆಲವರು ಕೆಲಸದ ಪರವಾನಗಿಯನ್ನು ಪಡೆದವರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!