Saturday, December 27, 2025

MGNREGA ರದ್ದತಿ ಭಾರತದ ಆರ್ಥಿಕ ಅಡಿಪಾಯವನ್ನೇ ದುರ್ಬಲಗೊಳಿಸಿದೆ: ರಾಹುಲ್ ಗಾಂಧಿ ಕಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಗ್ರಾಮೀಣ ಭಾರತದ ಆರ್ಥಿಕ ಅಡಿಪಾಯವನ್ನೇ ದುರ್ಬಲಗೊಳಿಸಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮನರೇಗಾ ರಾಜ್ಯಗಳಿಗೆ ಕೇವಲ ಉದ್ಯೋಗ ಸೃಷ್ಟಿ ಯೋಜನೆಯಷ್ಟೇ ಅಲ್ಲ, ಅದು ಗ್ರಾಮೀಣ ಮೂಲಸೌಕರ್ಯ ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಪ್ರಮುಖ ಸಾಧನವಾಗಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟರು. ಗ್ರಾಮೀಣ ಕಾರ್ಮಿಕರಿಗೆ ಭದ್ರತೆ ಒದಗಿಸುವ ಜೊತೆಗೆ, ರಾಜ್ಯಗಳು ತಮ್ಮ ಅಭಿವೃದ್ಧಿ ಅಗತ್ಯಗಳನ್ನು ಈ ಯೋಜನೆಯ ಮೂಲಕ ನಿರ್ವಹಿಸುತ್ತಿದ್ದವು ಎಂದು ಹೇಳಿದರು.

ಇದನ್ನೂ ಓದಿ:

ಕೇಂದ್ರ ಸರ್ಕಾರ ಹೊಸ ಕಾನೂನುಗಳ ಮೂಲಕ ರಾಜ್ಯಗಳ ನಿರ್ಧಾರ ಕೈಗೊಳ್ಳುವ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದೆ. ಈ ಮೂಲಕ ಫೆಡರಲ್ ವ್ಯವಸ್ಥೆಯ ಆತ್ಮವನ್ನೇ ಹಾನಿಗೊಳಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು. ಮನರೇಗಾ ಯೋಜನೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಮೆಚ್ಚುಗೆ ಪಡೆದ ಹಕ್ಕು ಆಧಾರಿತ ಅಭಿವೃದ್ಧಿ ಮಾದರಿಯಾಗಿದೆ. ಆದರೆ, ಸಚಿವ ಸಂಪುಟದ ಸಮಗ್ರ ಚರ್ಚೆಯಿಲ್ಲದೆ ಪ್ರಧಾನ ಮಂತ್ರಿಗಳ ಕಚೇರಿ ಏಕಪಕ್ಷೀಯವಾಗಿ ಈ ತೀರ್ಮಾನ ಕೈಗೊಂಡಿದೆ ಎಂದು ರಾಹುಲ್ ಗಾಂಧಿ ಕಿಡಿಕಾರಿದರು.

error: Content is protected !!