ಹೊಸ ದಿಗಂತ ವರದಿ, ಶಿವಮೊಗ್ಗ:
ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ಆರಂಭಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರಕಟಿಸಿದ್ದಾರೆ.
ಶಿವಮೊಗ್ಗ ವೈದ್ಯಕೀಯ ವಿಜ್ನಾನಗಳ ಸಂಸ್ಥೆ ಆವರಣದಲ್ಲಿ ಸೋಮವಾರ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕೋವಿಡ್ ಅಲೆ ಕಾಣಿಸಿಕೊಂಡಾಗ ವೈದ್ಯರುಗಳ ನೇಮಕ ಮಾಡಿಕೊಳ್ಳಲಾಯಿತು. ಆದರೆ ತೃತೀಯ ಹಂತದ ಆಸ್ಪತ್ರೆಗಳಲ್ಲಿ ಹಾಸಿಗೆಗಗಳಿಗೆ ಅನುಗುಣವಾಗಿ ದಾದಿಯರ ಕೊರತೆ ಕಾಣಿಸಿತು. ಇದನ್ನು ಮನಗಂಡು ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ನರ್ಸಿಂಗ್ ಕಾಲೇಜು ಆರಂಭಿಸಲಾಗುತ್ತಿದೆ. ಶಿವಮೊಗ್ಗದಲ್ಲಿಯೂ 100 ವಿದ್ಯಾರ್ಥಿಗಳಿಗೆ ಅವಕಾಶ ನೀಡಲು ಅನುಮತಿ ದೊರೆತಿದೆ. ಇದೇ ವರ್ಷ ತರಗತಿ ಪ್ರಾರಂಭವಾಗಲಿದೆ ಎಂದರು.