ಬೈಕ್‌ಗೆ ಕ್ಯಾಂಟರ್​ ಡಿಕ್ಕಿ: ಕೆಲಸಕ್ಕೆ ತೆರಳುತ್ತಿದ್ದ ಇಬ್ಬರು ಯುವಕರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೈಕ್​ಗೆ ಕ್ಯಾಂಟರ್​ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಪೋಶೆಟ್ಟಿಹಳ್ಳಿಯಲ್ಲಿ ಇಂದು ಸಂಭವಿಸಿತು.

ಮಂಚೇನಹಳ್ಳಿ ತಾಲೂಕಿನ ಎಂ.ಗುಡ್ಲಹಳ್ಳಿ ಗ್ರಾಮದ ಕೃಷ್ಣಪ್ಪ(30), ಹಳೆ ಬುದ್ಧಿಮಂತನಹಳ್ಳಿಯ ಪ್ರಕಾಶ್ (24)​ ಮೃತಪಟ್ಟಿದ್ದಾರೆ.

ಇಬ್ಬರೂ ಚಿಕ್ಕಬಳ್ಳಾಪುರದ ಕಂಪನಿಯೊಂದರ ಕಾರ್ಮಿಕರು. ಮುಂಜಾನೆ ಬೈಕ್​ನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ, ಚಿಕ್ಕಬಳ್ಳಾಪುರ ಕಡೆಯಿಂದ ಬರುತ್ತಿದ್ದ ಕ್ಯಾಂಟರ್​ ಬೈಕ್​ಗೆ ಡಿಕ್ಕಿಯಾಗಿದೆ. ಪರಿಣಾಮ, ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕ್ಯಾಂಟರ್​ ಚಾಲಕನ ಅತಿವೇಗ, ಅಜಾಗರೂಕತೆಯ ಚಾಲನೆ ಮತ್ತು ಸ್ಪೀಡ್ ಬ್ರೇಕರ್ ಇಲ್ಲದಿರುವುದು ಘಟನೆಗೆ ಕಾರಣ ಎಂದು ಸ್ಥಳೀಯರು ದೂರಿದರು. ಇದೇ ವೇಳೆ, ಅಪಘಾತ ಬೆಳಗ್ಗೆ 5:30ಕ್ಕೆ ಘಟನೆ ನಡೆದು 6:40ತ್ತಾದರೂ ಸ್ಥಳಕ್ಕೆ ಪೊಲೀಸರು ಬಾರದೇ ಇದ್ದುದಕ್ಕೆ ಆಕ್ರೋಶ ಹೊರಹಾಕಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!