ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಪೋಶೆಟ್ಟಿಹಳ್ಳಿಯಲ್ಲಿ ಇಂದು ಸಂಭವಿಸಿತು.
ಮಂಚೇನಹಳ್ಳಿ ತಾಲೂಕಿನ ಎಂ.ಗುಡ್ಲಹಳ್ಳಿ ಗ್ರಾಮದ ಕೃಷ್ಣಪ್ಪ(30), ಹಳೆ ಬುದ್ಧಿಮಂತನಹಳ್ಳಿಯ ಪ್ರಕಾಶ್ (24) ಮೃತಪಟ್ಟಿದ್ದಾರೆ.
ಇಬ್ಬರೂ ಚಿಕ್ಕಬಳ್ಳಾಪುರದ ಕಂಪನಿಯೊಂದರ ಕಾರ್ಮಿಕರು. ಮುಂಜಾನೆ ಬೈಕ್ನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ, ಚಿಕ್ಕಬಳ್ಳಾಪುರ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಬೈಕ್ಗೆ ಡಿಕ್ಕಿಯಾಗಿದೆ. ಪರಿಣಾಮ, ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕ್ಯಾಂಟರ್ ಚಾಲಕನ ಅತಿವೇಗ, ಅಜಾಗರೂಕತೆಯ ಚಾಲನೆ ಮತ್ತು ಸ್ಪೀಡ್ ಬ್ರೇಕರ್ ಇಲ್ಲದಿರುವುದು ಘಟನೆಗೆ ಕಾರಣ ಎಂದು ಸ್ಥಳೀಯರು ದೂರಿದರು. ಇದೇ ವೇಳೆ, ಅಪಘಾತ ಬೆಳಗ್ಗೆ 5:30ಕ್ಕೆ ಘಟನೆ ನಡೆದು 6:40ತ್ತಾದರೂ ಸ್ಥಳಕ್ಕೆ ಪೊಲೀಸರು ಬಾರದೇ ಇದ್ದುದಕ್ಕೆ ಆಕ್ರೋಶ ಹೊರಹಾಕಿದರು.