ಹೊಸದಿಗಂತ ವರದಿ, ಮೈಸೂರು:
ಇಲ್ಲಿನ ಎಪಿಎಂಸಿಯ ಆವರಣದಲ್ಲಿ ಮಂಗಳವಾರ ಸಂಜೆ ನಡೆಸಿದ್ದ ಏಜೆಂಟ್ ಕ್ಯಾಪ್ಸಿಕಂ ರವಿ ಎಂಬುವರ ಹತ್ಯೆ ಪ್ರಕರಣಕ್ಕೆ ಸಂಬoಧಿಸಿದoತೆ ಐದು ಮಂದಿ ಆರೋಪಿಗಳನ್ನು ಮೈಸೂರು ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಂಗಳವಾರ ಸಂಜೆ ಕ್ಯಾಪಿಕ್ಸಂ ರವಿ ತಮ್ಮ ಕಚೇರಿಯಲ್ಲಿದ್ದಾಗ ದುಷ್ಕರ್ಮಿಗಳು ಅವರನ್ನು ಲಾಂಗ್, ಮಚ್ಚುಗಳಿಂದ ಕೊಲೆ ಮಾಡಿ ಪರಾರಿಯಾಗಿದ್ದರು. ಆರೋಪಿಗಳ ಬಂಧನಕ್ಕಾಗಿ ಎಸ್ಪಿ ಚೇತನ್ ಅವರು ಎಸ್ಐ ವಿ.ಎಸ್.ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದರು. ಘಟನೆ ನಡೆದ ಸ್ಥಳದಲ್ಲಿ, ಆಸು ಪಾಸಿನಲ್ಲಿದ್ದ ಸಿಸಿ ಟಿವಿ ಕ್ಯಾಮರಾದಲ್ಲಿ ದಾಖಲಾಗಿದ್ದ ಫುಟೇಜ್ಗಳನ್ನು ಪರಿಶೀಲಿಸಿದ ಪೊಲೀಸರು, ತನಿಖೆ ನಡೆಸಿ, ಖಚಿತ ಮಾಹಿತಿ ಮೇಲೆ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ವ್ಯವಹಾರಕ ದ್ವೇಷದಿಂದಲೇ ರವಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಬಂಧಿತ ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಬಂಧಿತರ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.