ಕಾರು-ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು

ಹೊಸದಿಗಂತ ವರದಿ, ವಿಜಯಪುರ:

ಬೈಕ್ ಹಾಗೂ ಕಾರ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ ಬಳಿ ನಡೆದಿದೆ.

ಮೃತಪಟ್ಟವನನ್ನು ಬರಗುಡಿಯ ಶಿವಾನಂದ ಪರಸಪ್ಪ ಹರಳಯ್ಯ (33) ಎಂದು ಗುರುತಿಸಲಾಗಿದೆ.

ಶಿವಾನಂದ ಹರಳಯ್ಯ ಈತ ಬೈಕ್ ನಲ್ಲಿ ರೇವತಗಾಂವ ಕಡೆ ತೆರಳುತ್ತಿದ್ದಾಗ, ಈ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಈ ಘಟನೆಯಲ್ಲಿ ಕಾರ್ ಚಾಲಕನಿಗೂ ಗಾಯವಾಗಿದೆ.

ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!