Friday, June 2, 2023

Latest Posts

ಕಾರ್-ಬೈಕ್ ಡಿಕ್ಕಿ: ಸವಾರರಿಬ್ಬರ ಸಾವು

ಹೊಸದಿಗಂತ ವರದಿ, ವಿಜಯಪುರ:

ಕಾರ್, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವಿಗೀಡಾದ ಘಟನೆ ಜಿಲ್ಲೆಯ ತಿಕೋಟಾ ಪಟ್ಟಣದ ಐಬಿ ಬಳಿ ನಡೆದಿದೆ.
ಮೃತಪಟ್ಟವನನ್ನು ಅಲಿಯಾಬಾದ್ ನಿವಾಸಿ ಸುರೇಶ (30) ಹಾಗೂ ವಿಜಯಪುರ ನಗರ ನಿವಾಸಿ ಭೀಮಪ್ಪ ಎಂದು ಗುರುತಿಸಲಾಗಿದೆ.
ಕಾರ್, ಬೈಕ್ ಡಿಕ್ಕಿಯಾದ ಪರಿಣಾಮ ಸುರೇಶ ಸ್ಥಳದಲ್ಲಿಯೇ ಅಸುನೀಗಿದ್ದು, ಭೀಮಪ್ಪ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ
ಮೃತಪಟ್ಟಿದ್ದಾನೆ.
ಘಟನಾ ಸ್ಥಳಕ್ಕೆ ತಿಕೋಟಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!