ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಝಳಕಿ-ಬಳ್ಳೊಳ್ಳಿ ರಸ್ತೆಯಲ್ಲಿ ಕಾರು ಚಾಲನೆ ಮಾಡುವಾಗ ದಿಢೀರ್ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದೆ.
ಕಾರಿಗೆ ಬೆಂಕಿ ಹೊತ್ತಿಕೊಳ್ತಿದ್ದಂತೆ ಚಾಲಕ ಹಾಗೂ ಮತ್ತೊಬ್ಬರು ಕಾರಿನಿಂದ ಹೊರಬಂದಿದ್ದಾರೆ. ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರೈಲು ವಿಜಯಪುರದಿಂದ ಸೊಲ್ಲಾಪುರಕ್ಕೆ ತೆರಳುತ್ತಿದ್ದಾಗ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.