ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಒಂದೇ ಕುಟುಂಬದ ಮೂವರ ದುರ್ಮರಣ

ಹೊಸದಿಗಂತ ವರದಿ, ಬೆಳಗಾವಿ
ರಸ್ತೆ ಬದಿ ನಿಂತಿದ್ದ ಲಾರಿಗೆ ಇನೋವಾ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ನಡೆದಿದೆ.
ಪಟ್ಟಣದ ಸಮೀಪದ ನರಸಿಂಗಪೂರ ಗ್ರಾಮದ ಬಳಿಯ ರಾ.ಹೆ. 4 ರ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಢಿಕ್ಕಿ ರಭಸಕ್ಕೆ ವೈದ್ಯೆ ಶ್ವೇತಾ ಮುರಗೋಡ (37) ಹಾಗೂ ಪುತ್ರಿ ಶಿಯಾ (7)ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ . ತೀವ್ರ ಗಾಯಗೊಂಡಿದ್ದ ವೈದ್ಯ ಸಚೀನ್ ಮುರಗೋಡೆ(40) ಅವರನ್ನು ತಕ್ಷಣವೇ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಅವರು ಭಾನುವಾರ ತಡರಾತ್ರಿ ಮೃತಪಟ್ಟಿದ್ದಾರೆ.
ಹುಕ್ಕೇರಿ ಬಿಜೆಪಿ ಮಹಿಳಾ ಮಂಡಳಿ ಅಧ್ಯಕ್ಷರಾಗಿದ್ದ ಡಾ. ಶ್ವೇತಾ ಮುರಗೋಡ ಅವರು ಸಾಮಾಜಿಕ ಕಾರ್ಯಗಳಿಂದ ಗುರುತಿಸಿಕೊಂಡಿದ್ದರು. ಯಮಕನಮರಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!