ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ನ ಹಾರಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಭಾರಿ ಅನಾಹುತ ತಪ್ಪಿದೆ. ಬಿಡದಿ ಹೋಬಳಿಯ ಮಾದಾಪುರ ಗೇಟ್ ಬಳಿ ಘಟನೆ ನಡೆದಿದೆ.
ಕಾರು ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಹೋಬಳಿಯ ಮಾದಾಪುರ ಗೇಟ್ ಬಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ವಾಹನವು ಡಿವೈಡರ್ ದಾಟಿ ಮುಂದೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಿನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಸುರಕ್ಷಿತರಾಗಿದ್ದಾರೆ. ಸಂತ್ರಸ್ತರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು. ರಾಮನಗರ ಸಂಚಾರ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.