ಮರಕ್ಕೆ ಕಾರು ಡಿಕ್ಕಿ: ಚಾಲಕನ ಸಾವು

ದಿಗಂತ ವರದಿ ಮಡಿಕೇರಿ:

ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ವಿರಾಜಪೇಟೆ ಸಮೀಪದ ಪೆರುಂಬಾಡಿಯಲ್ಲಿ ನಡೆದಿದೆ.
ಪೆರುಂಬಾಡಿ ನಿವಾಸಿ ಅಬ್ದುಲ್ ರೆಹಮಾನ್ (55) ಎಂಬವರೇ ಸಾವಿಗೀಡಾದವರಾಗಿದ್ದು,ಗಂಭೀರವಾಗಿ ಗಾಯಗೊಂಡಿರುವ ಅವರ ಮೊಮ್ಮಗುವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ವೀರಾಜಪೇಟೆ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!