ಟೈರ್ ಪಂಚರ್ ಆಗಿ ಕೆರೆಗೆ ಉರುಳಿದ ಕಾರು: ಐವರು ವೈದ್ಯಕೀಯ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾರಿನ ಟೈರ್ ಪಂಚರ್ ಆಗಿ ನಿಯಂತ್ರಣ ಕಳೆದ ಕೊಂಡು ರಸ್ತೆ ಬದಿಯಲ್ಲಿದ್ದ ಕೆರೆಗೆ ಉರುಳಿ ಬಿದ್ದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮುದ್ದೆನಹಳ್ಳಿ ಗೇಟ್ ಬಳಿ ನಡೆದಿದೆ.

ತಕ್ಷಣ ಸ್ಥಳೀಯರು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿದ್ದವರು ಚೆನ್ನೈ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!