ಹೊಸದಿಗಂತ ವರದಿ, ವೀರಾಜಪೇಟೆ:
ಕಾರು ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ವೀರಾಜಪೇಟೆಯಲ್ಲಿ ನಡೆದಿದೆ.
ವೀರಾಜಪೇಟೆಯ ಮೂರ್ನಾಡು ರಸ್ತೆಯ ಕಾವೇರಿ ಸರ್ಕಲ್ ಬಳಿ ಸ್ಕೂಟಿ ಮತ್ತು ಕಾರು ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಚೆಯ್ಯಂಡಾಣೆ ಗ್ರಾಮದ ಸಚಿನ್ ಮುತ್ತಣ್ಣ (26) ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು.
ಚಿಕಿತ್ಸೆಗಾಗಿ ಅವರನ್ನು ಮಡಿಕೇರಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಸಾವಿಗೀಡಾಗಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ