ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರಿನ ಕಡೂರು ತಾಲೂಕಿನ ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ206ರ ಮತಿಘಟ್ಟ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ.
ಕಾರ್ ಹಾಗೂ ಟಿಟಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಗು ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಕಾರ್ನಲ್ಲಿದ್ದ ಗಿರಿಧರ್ ಹಾಗೂ ಮಯಾಂಕ್ ಮೃತರು.
ಹೊನ್ನಾವರದಿಂದ ಸಂಬಂಧಿಕರ ಮದುವೆಗಾಗಿ ಗಿರಿಧರ್ ಕುಟುಂಬ ತೆರಳುತ್ತಿತ್ತು. ಇನ್ನು ಕೇರಳದಿಂದ ಚಿಕ್ಕಮಗಳೂರಿಗೆ ಟಿಟಿ ಪ್ರವಾಸಕ್ಕೆಂದು ಬಂದಿತ್ತು. ಟಿಟಿಯಲ್ಲಿದ್ದ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗ ಆಸ್ಪತ್ರೆಗೆ ಗಾಯಗೊಂಡವರನ್ನು ದಾಖಲಿಸಲಾಗಿದೆ.