ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನ

ಹೊಸ ದಿಗಂತ ವರದಿ, ಅಂಕೋಲಾ:

ಭಾರತೀಯ ಜನತಾ ಪಕ್ಷದ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನ ಮತ್ತು ಪೇಜ್ ಪ್ರಮುಖರ ಸಮಾವೇಶ ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ನಡೆಯಿತು.
ಸಹಸ್ರಾರು ಜನರು ಪಾಲ್ಗೊಂಡಿದ್ದ ಬೃಹತ್ ಸಮಾವೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉದ್ಘಾಟಿಸಿದರು.
ಸಮಾವೇಶದಲ್ಲಿ ಕಾರವಾರ ಮತ್ತು ಅಂಕೋಲಾ ತಾಲೂಕುಗಳ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಸೇರಿದಂತೆ ನೂರಾರು ಜನ ಬೇರೆ ಪಕ್ಷಗಳ ಪ್ರಮುಖರು ಶಾಸಕಿ ರೂಪಾಲಿ ನಾಯ್ಕ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.
ಕಾರವಾರಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಬರಮಾಡಿಕೊಂಡರು.
ವಿವಿಧ ವಾದ್ಯ ಘೋಷಗಳು ಸುಗ್ಗಿ ಕುಣಿತ,ಗೊಂಬೆ ನೃತ್ಯ ಗಮನ ಸೆಳೆದವು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಶಾಸಕಿ ರೂಪಾಲಿ ನಾಯ್ಕ ಸೇರಿದಂತೆ ಪಕ್ಷದ ಕಾರವಾರ ಅಂಕೋಲಾ ತಾಲೂಕುಗಳ ಬಿಜೆಪಿ ಮುಖಂಡರು ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!