ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಇಂದು ಬಿಜೆಪಿಯಿಂದ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ವಿಚಾರ ಸಂಬಂಧ ಬಿಜೆಪಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ.
ಬೆಳಿಗ್ಗೆ 10 ಗಂಟೆಗೆ ವಿಜಯೇಂದ್ರ, ಅಶೋಕ್ ನೇತೃತ್ವದಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ. ಇದಕ್ಕೂ ಮುನ್ನ ಬೆಳಿಗ್ಗೆ 9:30ಕ್ಕೆ ಕುಮಾರಕೃಪಾ ಅತಿಥಿ ಗೃಹದಿಂದ ಬಿಜೆಪಿ ಱಲಿ ನಡೆಸಲಿದ್ದಾರೆ. ಇದಾದ ಬಳಿಕ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ. ರಾಜಾತಿಥ್ಯಕ್ಕೆ ಕೈದಿಗಳಿಂದ ಸರ್ಕಾರ ಹಣ ವಸೂಲಿ ಅಂತ ಕಿಡಿಕಾರಿದ್ದಾರೆ.
ಕೈದಿಗಳಿಗೆ ರಾಜಾತಿಥ್ಯ ವಿರುದ್ಧ ಕೇಸ್ ದಾಖಲು: ಇಂದು ಸಿಎಂ ನಿವಾಸಕ್ಕೆ ಮುತ್ತಿಗೆ

