Tuesday, March 28, 2023

Latest Posts

ಮೆಟ್ರೋ ಪಿಲ್ಲರ್​ ಬಿದ್ದು ತಾಯಿ ಮಗು ಸಾವು ಪ್ರಕರಣ: ಪರಿಹಾರ ತಿರಸ್ಕರಿಸಿದ ಕುಟುಂಬಸ್ಥರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ನಮ್ಮ ಮೆಟ್ರೋ ಪಿಲ್ಲರ್‌ ಕುಸಿದು ತಾಯಿ, ಮಗು ಸಾವು ಪ್ರಕರಣ ನಡೆದು ಒಂದು ತಿಂಗಳಾಗುತ್ತಾ ಬಂದರೂ ಇನ್ನು ಕಂಟ್ರಾಕ್ಟರ್ ಮೇಲೇ ಸೂಕ್ತ ಕ್ರಮ ಕೈಗೊಂಡಿಲ್ಲ. ಇನ್ನೊಂದು ಕಡೆ ಸಿಎಂ ಕಡೆಯಿಂದ ಘೋಷಣೆಯಾದ 10 ಲಕ್ಷ ಪರಿಹಾರ ಕೂಡ ಕುಟುಂಬಸ್ಥರಿಗೆ ದಕ್ಕಿಲ್ಲ.

ಬಿಎಂಆರ್​ಸಿಎಲ್ 20 ಲಕ್ಷ ಪರಿಹಾರವನ್ನು ನೀಡುತ್ತಿದ್ದು ಅದನ್ನು ತಿರಸ್ಕರಿಸಿರುವ ಕುಟುಂಬಸ್ಥರು, ಮೊದಲು ಕಂಟ್ರಾಕ್ಟರ್ ಲೈಸೆನ್ಸ್ ರದ್ದು‌ಮಾಡಿ, ಇದುವರೆಗೆ ಕಂಟ್ರಾಕ್ಟರ್ ಹಾಗೂ ಬಿಎಂಆರ್​ಸಿಎಲ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಆಗಿಲ್ಲ. ನಮ್ಮ ಕುಟುಂಬದ ದುರಂತಕ್ಕೆ ಹೊಣೆಯಾದವರ ವಿರುದ್ಧ ಕ್ರಮ ಕೈಗೊಳ್ಳದೇ ಇದ್ರೆ ಪರಿಹಾರ ಬೇಕಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ತಪ್ಪಾಗಿರುವ ಬಗ್ಗೆ ಕಾಂಟ್ರಾಕ್ಟರ್ ಮೇಲೆ ಕೈಗೊಳ್ಳಬೇಕಾದ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಎಂದು ಬಿಎಂಆರ್​ಸಿಎಲ್(BMRCL) ಎಂಡಿ ಅಂಜುಂ ಪರ್ವೇಜ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!