ಹುಲಿ ಉಗುರು ಧರಿಸಿದ ಪ್ರಕರಣ: ನಟ ಜಗ್ಗೇಶ್ ಮನೆಗೆ ಅರಣ್ಯ ಅಧಿಕಾರಿಗಳು ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹುಲಿ ಉಗುರು ಧರಿಸಿದ್ದ ಪ್ರಕರಣದಲ್ಲಿ ನಟ ಜಗ್ಗೇಶ್ ಅವರಿಗೂ ಸಂಕಷ್ಟ ಎದುರಾಗಿದ್ದು, ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವಂತ ನಟ ಜಗ್ಗೇಶ್ ಅವರ ನಿವಾಸಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಅವರ ವಿರುದ್ಧ ಹುಲಿ ಉಗುರು ಧರಿಸಿದ್ತ ಆರೋಪದ ಹಿನ್ನಲೆಯಲ್ಲಿ ದಾಖಲಾಗಿರುವಂತ ದೂರಿನ ಹಿನ್ನಲೆಯಲ್ಲಿ, ಮನೆಗೆ ಭೇಟಿ ನೀಡಿದ್ದಾರೆ.

ನಟ ಜಗ್ಗೇಶ್ ಅವರು ತಮ್ಮ ತಾಯಿಯವರು ತಾನು ಸಣ್ಣವನಿದ್ದಾಗ ನನಗೆ ಹುಲಿ ಉಗುರು ಹೊಂದಿದ್ದಂತ ಲಾಕೆಟ್ ನೀಡಿದ್ದರು. ಅದೇ ಇದು. ತಾನು ಧರಿಸಿರೋದಾಗಿ ಹೇಳಿದ್ದಂತ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಅರಣ್ಯ ಇಲಾಖೆಯ ಅಧಿಕಾರಿಗಳು ದೂರು ಕೂಡ ದಾಖಲಿಸಿದ್ದರು.

ಜಗ್ಗೇಶ್ ಅವರ ಪತ್ನಿಯೊಂದಿಗೆ ಚರ್ಚಿಸುತ್ತಿದ್ದು, ಮನೆ ಪರಿಶೀಲನೆಯನ್ನು ಕೆಲವೇ ಕ್ಷಣಗಳಲ್ಲಿ ನಡೆಸೋದಕ್ಕೆ ಸಿದ್ಧತೆಯನ್ನು ಕೈಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಮಲ್ಲೇಶ್ವರಂನ ಜಗ್ಗೇಶ್ ನಿವಾಸದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತೆರಳಿದಂತ ವೇಳೆಯಲ್ಲಿ ಅವರು ಮನೆಯಲ್ಲಿ ಇಲ್ಲ ಎಂಬುದಾಗಿ ತಿಳಿದು ಬಂದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!